Breaking News

ಧಾರವಾಡ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು

.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು

ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ.

ಓಡಿಸಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. ಕಾರ್ಯಕ್ರಮದ ಸಲುವಾಗಿ ಬೃಹತ್ ವೇದಿಕೆ ಕೂಡ ನಿರ್ಮಾಣಗೊಂಡಿತ್ತು. ಅಲ್ಲದೇ ಆಸನಗಳ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಇದೀಗ ಹಠಾತ್ ರದ್ದಾಗಿದ್ದರಿಂದ ಇದೀಗ ಎಲ್ಲವನ್ನೂ ತೆರವುಗೊಳಿಸಲಾಗುತ್ತಿದೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *