Breaking News

ಬೈಕ್​ ಸವಾರನೊಬ್ಬಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ

ತುಮಕೂರು: ಇಲ್ಲೊಬ್ಬ ಬೈಕ್​ ಸವಾರನೊಬ್ಬ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಹನುಮಂತಪುರದಲ್ಲಿ ನಡೆದಿದೆ. ಹನುಮಂತಪುರದ ಮೂಲದ ನಿವಾಸಿ ಕೃಷ್ಣ (34) ಎಂಬುವವರು ಮಿಡಿಗೇಶಿಯಿಂದ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಕರಡಿ ಅಡ್ಡಬಂದಿದೆ. ಇದರಿಂದ ಗಾಬರಿಗೊಂಡ ಕೃಷ್ಣ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದಿದ್ದಾನೆ.

ಬೈಕ್​ ಮೇಲೆ ಸ್ವಂತ ಊರಿಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಏಕಾಏಕಿ ಕರಡಿ ಅಡ್ಡಬಂದಿದೆ. ಇದರಿಂದ ಅವಕ್ಕಾದ ಕೃಷ್ಣ ಕರಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ​ಆಯತಪ್ಪಿ ಬಿದ್ದಿದ್ದಾನೆ. ಇದರಿಂದ ಕೃಷ್ಣನಿಗೆ ಗಾಯಗಳಾಗಿವೆ. ನಂತರ ಸ್ಥಳೀಯರ ಸಹಾಯದಿಂದ ಕೃಷ್ಣ ಮಧುಗಿರಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಾಹಿತಿ ತಿಳಿದ ಅರಣ್ಯಾಧಿಕಾರಿ ಮುತ್ತುರಾಜ್, ತಕ್ಷಣವೇ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ: ಬ್ಲ್ಯಾಕ್‌ಮೇಲ್ ಮಾಡಿ ಯುವತಿಗೆ ಅತ್ಯಾಚಾರ ಎಂಬ ಗಂಭೀರ ಆರೋಪ..

ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ …

Leave a Reply

Your email address will not be published. Required fields are marked *