Breaking News

ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ ವಿನಯ್ ಕುಲಕರ್ಣಿ.!

ಬೆಳಗಾವಿ: ರಾಜ್ಯದಲ್ಲಿ ಬಹುತಮದ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಈಗಾಗಲೇ ಗ್ಯಾರಂಟಿ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಆದರೆ, ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಸಲ ಸಹಜವಾಗಿ ಹೆಚ್ಚಿನ ಶಾಸಕರು ಆಯ್ಕೆ ಆಗಿದ್ದಾರೆ. ಅನೇಕರನ್ನು ಸಮಾಧಾನ ಮಾಡಲು ಹೋಗಿ ಸಚಿವ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಈ ಬಾರಿ ಲಿಂಗಾಯತ ಸಮಾಜದ 37 ಶಾಸಕರು ಆಯ್ಕೆಯಾಗಿದ್ದಾರೆ. ಅಲ್ಲದೇ ಪಂಚಮಸಾಲಿ ಸಮಾಜದಲ್ಲಿ 13 ಜನ ಶಾಸಕರು ಆಯ್ಕೆಯಾಗಿದ್ದೇವೆ. ಸಮಾಜ ಕಟ್ಟುವ ಕೆಲಸ ಮಾಡಿರೋದನ್ನು ಪಕ್ಷ ಗಮನಿಸಬೇಕಿತ್ತು. ಆದರೆ, ಪಕ್ಷ ಇದನ್ನು ಗಮನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *