Breaking News

ಗೋವನಕೊಪ್ಪದಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು.

ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ.ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ.ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *