ಕಲ್ಬುರ್ಗಿ: ಅಕ್ರಮ ಮರಳು ದಂಧೆ ತಡೆಯಲು ಹೋದ ಪೋಲೀಸ್ ಪೇದೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.
ಕಲಬುರಗಿಯ ನೆಲೋಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಮೈಸೂರ ಚವ್ಹಾಣ ಹತ್ಯೆಯಾದ ಪೋಲೀಸ್ ಹೆಡ್ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ.
ಮೃತ ಹೆಡ್ ಕಾನ್ಸ್ ಟೇಬಲ್ ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದಾರೆ. ಈ ವೇಳೆ ನೆಲೋಗಿ ಠಾಣಾ ವ್ಯಾಪ್ತಿಯ ನಾರಾಯಣಪುರ ಬಳಿ ಟ್ರಾಕ್ಟರ್ ಹರಿಸಿ ಹತ್ಯೆಗೈದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





