ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ ಎಂದು ತಿಳಿದ್ದಾರೆ. ಈಗೆ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ, ಬಹಿರಂಗ ಹೇಳಿಕೆ ಕೊಡೋ ನಾನು ಮಾತಾಡ್ತೀನಿ.ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ.ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ, ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ದ ಈಶ್ವರಪ್ಪ ಗರಂ ಆದರು. ಆಪರೇಶನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು ಎಂದ ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಬಂದ ಮೇಲೆ ಅಲ್ಪ ಸ್ವಲ್ಪ ಅಶಿಸ್ತು ಬಂದಿದ್ದು ನಿಜ, ಇನ್ನು ಮುಂದೆ ನಮ್ಮ ನಾಯಕರು ಅವರ ಬಾಲ ಕಟ್ ಮಾಡ್ತಾರೆ ಎಂದು ಈಶ್ವರಪ್ಪ ನವರು ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





