Breaking News

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ.

ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಕೂಡ ಒಂದು.

ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಅವರು ಚಾಲನೆ ನೀಡಿದರು.

ಧಾರವಾಡದಿಂದ ಹೊರಟ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸ್ವತಃ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಕೂಡ ವಂದೇ ಭಾರತ ರೈಲಿನಲ್ಲಿ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿ ಗಮನಸೆಳೆದರು.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *