ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ.
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಿಪಕ್ಷದವರು ಏನೇ ಹೇಳಿದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ಅಲ್ಲದೇ ಸರಕಾರ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





