ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ತಾಲ್ಲೂಕಿನ ವಿವಿಧ ಪ್ರದೇಶದಲ್ಲಿ ಪೋಲಿಸ್ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ,

ಇನ್ನು ಸಾರ್ವಜನಿಕ ರಿಂದ ಸ್ಥಳದಲ್ಲಿ ಬಾಂಬೆ ಓಸಿ ಮೂಲಕ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೋಲಿಸರು ಜೂಜಾಟದ ಹಣ ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ , ಒಟ್ಟಿನಲ್ಲಿ ಗದಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜೂಜಾಟ ಪ್ರಕರಣಗಳ ಹೆಚ್ಚಾಗುತ್ತೀದ್ದು ಈ ರೀತಿಯ ಜೂಜಾಟಕ್ಕೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಮುಂದಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





