Breaking News

ಬಸ್ ಇಲ್ಲದೆ ಶಾಲಾ ಮಕ್ಕಳು ಪರದಾಟ, ಪಾಲಕರು ಹಾಗೂ ಮಕ್ಕಳಿಂದ ಪ್ರತಿಭಟನೆ;

ಧಾರವಾಡ : ಶಕ್ತಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರ ಪ್ರಯಾಣ ಸಂಖ್ಯೆ ಹೆಚ್ಚಾದ ಹಿನ್ನಲೆ ವಿದ್ಯಾರ್ಥಿಗಳ ದಿನನಿತ್ಯ ತೊಂದರೆ ಹಾಗುತ್ತಿದೆ. ಧಾರವಾಡ ತಾಲೂಕಿನ ಧಾರವಾಡ, ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧಾರವಾಡ ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮಕ್ಕೆ ಬಸ್ ಸಮಸ್ಯೆ ಇದ್ದು, ವಿಧ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.

ಎರಡು ಬಸ್ ನಲ್ಲಿ ಸಂಚರಿಸುವ ಜನರು ಒಂದೇ ಬಸ್ ನಲ್ಲಿ ಸಂಚಾರ ಮಾಡುವ ಸ್ಥಿತಿ ನಿರ್ಮಾಣವಾಗಿದ್ದು, ಜನರು ಬಸ್ ಚಾಲಕನ ಜೋತೆ ವಾಗ್ವಾದಕ್ಕಿಳಿಯುವ ಪರಿಸ್ಥಿತಿ ಎದುರಾಗುತ್ತಿದೆ. ಸಾರಿಗೆ ಸಂಸ್ಥೆ ಬಸ್ ಚಾಲಕರು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಗಳೊಂದಿಗೆ ಬಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು, ಇಲ್ಲದೆ ಇದ್ದರೆ ವಿದ್ಯಾರ್ಥೀಗಳ ಭವಿಷ್ಯದ ಜೊತೆಗೆ ಸಾರಿಗೆ ಅಧಿಕಾರಿಗಳು ಆಟವಾಡಿದಂತೆ ಆಗುತ್ತದೆ.

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *