Breaking News

ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಾರಿಗೆ ಇಲಾಖೆ ಸಿಬ್ಬಂದಿಯಿಂದ ಗಲಾಟೆ; ಸಾರ್ವಜನಿಕರ ಅಕ್ರೋಶ.

ಧಾರವಾಡ : ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಜಟಾಪಟಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಸುಲಭ ಶೌಚಾಲಯವಿದ್ದರೂ ಕಂಪೌಂಡ್ ಬಳಿ ಸಾರ್ವಜನಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಎಳೆದಾಡಿದ್ದಾರೆ.

100 ರೂಪಾಯಿ ದಂಡ ಕಟ್ಟುವಂತೆ ಆ ವ್ಯಕ್ತಿಯನ್ನು ಸಿಬ್ಬಂದಿ ಎಳೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇಬ್ಬರೂ ಕೈಕೈ ಕೂಡ ಮಿಲಾಯಿಸಿದ್ದರು. ಕೆಲ ಮಹಿಳೆಯರೊಂದಿಗೂ ಸಿಬ್ಬಂದಿ ಇದೇ ರೀತಿ ವರ್ತನೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕಿದ್ದ ಸಿಬ್ಬಂದಿ ಈ ರೀತಿ ಕೈಕೈ ಮಿಲಾಯಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *