Breaking News

ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಗಲಾಟೆ ವೇಳೆ ಪೋಲಿಸ್‌ ಅಧಿಕಾರಿಗೆ ಗಾಯ

ಬೆಳಗಾವಿ; ಜಿಲ್ಲೆಯ ರಾಮದರ್ಗ ತಾಲ್ಲೂಕಿನ ಕಾಲೇಜ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ, ಕ್ಷುಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಈ ಗಲಾಟೆ ನಡದಿದೆ , ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್‌ ಇಲಾಖೆಯ ಎಸ್.ಐ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ, ಕಾಲೇಜು ಆವರಣದಲ್ಲಿ ಮೊದಲು ಪ್ರಾರಂಭವಾದ ಜಗಳವನ್ನು ಬಗೆಹರಿಸಿದ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಮನೆಗೆ ಹೋಗುವಂತೆ ಹೇಳಿದ್ದಾರೆ , ತದನಂತರದಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿಗಳು ರಾಮದುರ್ಗ ಬಸ್ ನಿಲ್ದಾಣದಲ್ಲಿ ಮತ್ತೆ ಜಗಳ ಪ್ರಾರಂಭ ಮಾಡಿದ್ದಾರೆ.

ನಂತರ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್‌ ಸಿಬ್ಬಂದಿಗಳು ಜಗಳ ಬಗೆಹರಿಸಲು ಮುಂದಾಗಿದ್ದಾರೆ. ಆದರೆ ವಿಕೋಪದಲ್ಲಿ ವಿದ್ಯಾರ್ಥಿಗಳ ನಡುವೆ ಸಿಲುಕಿದ ಅಧಿಕಾರಿಗೆ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಾಮದುರ್ಗ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ವಿಚಾರಣೆಯಲ್ಲಿ ಇದೆ , ಘಟನೆ ಸಂಭಂದಿಸದಂತೆ ಕೇಲ ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಲಾಗುತ್ತಿದೆ.

Share News

About BigTv News

Check Also

Featured Video Play Icon

ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…

ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ …

Leave a Reply

Your email address will not be published. Required fields are marked *

You cannot copy content of this page