ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಇನ್ನು ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನಲೆ ಮದ್ಯ ಅಬಕಾರಿ ಇಲಾಖೆಯಿಂದ 36000 ಕೋಟಿ ತೆರಿಗ ಸಂಗ್ರಹ ಮಾಡಲು ನಿರ್ಧರಿಸಿದೆ.

bigtvnews | Hubli Dharwad News | Kannada News | Karnataka News Hubli News | News In Hubli | Local news





