ಹೊಯ್ಸಳ ವಾಹನದ ಸಿಬ್ಬಂದಿ-ಅಧಿಕಾರಿಗಳು ಹುಬ್ಬಳ್ಳಿ ಧಾರವಾಡದ ವಿವಿಧ ಪ್ರದೇಶ, ಶಾಲಾ ಕಾಲೇಜು ಗಳಿಗೆ ಭೇಟಿ ನೀಡಿ ನಾಗರಿಕರಿಗೆ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು.

ಈ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ಈ ಸಮಯದಲ್ಲಿ ಮಾತನಾಡಿದ ಪೋಲಿಸ್ ಇಲಾಖೆಯ ಸಿಬ್ಬಂದಿಗಳು 112 ಬಗ್ಗೆ ಹಾಗೂ ಸಹಾಯವಾಣಿ ಯಾವ ರೀತಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತದೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





