ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರೊಂದರ ಟೈಯರ್ ಬ್ಲಾಸ್ಟ್ ಆಗಿ ಅಪಘಾತಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ನವನಗರದ ಆರ್.ಟಿ.ಓ ಬಳಿ ನಡೆದಿದೆ.
ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬಿ.ಆರ್.ಟಿಎಸ್ ಬ್ಯಾರಿಕೇಡ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಬೆಳಗಾವಿ ಮೂಲದ ವಕೀಲರೊಬ್ಬರು ಪ್ರಯಾಣಿಸುತಿದ್ದರೆನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





