ಧಾರವಾಡ : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಐದು ಲಕ್ಷ ಸಹಿ ಅಭಿಯಾನವನ್ನು ಶ್ರೀ ರಾಮ ಸೇನೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿದೆ. ಜನರಿಗೆ ಈ ಕಾಯ್ದೆಯಿಂದ ಸಮಾನ ಅವಕಾಶಗಳು ಜನರಿಗೆ ದೊರೆಯುತ್ತದೆ ಎಂದು ತಿಳಿಸಿದರು.
ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಚಿತ್ರ ನಟರು, ರಂಗಭೂಮಿ ಕಲಾವಿದರು, ವಕೀಲರು, ಡಾಕ್ಟರ್ ಗಳು ಹಾಗೂ ವ್ಯಾಪಾರಸ್ಥರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು. ದೇಶದ ಐಕ್ಯತೆ ಮತ್ತು ಭದ್ರತೆಯ ದೃಷ್ಟಿಯಿಂದ ಏಕರೂಪ ನಾಗರಿಕ ಸಂಹಿತೆಯನ್ನು ಸರಕಾರ ಅನುಷ್ಠಾನ ಗೊಳಿಸಬೇಕು ಎಂದು ಮುತಾಲಿಕ
ಆಗ್ರಹಿಸಿದರು.
ಶ್ರೀರಾಮ ಸೇನಾದ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಮುಖಂಡರಾದ ಅಣ್ಣಪ್ಪ ದಿವಟಗಿ, ಪಾಂಡು ಯಮೋಜಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





