ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ.
ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದಾಳೆ. ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಬಾಲಕನ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





