Breaking News

ಅಯೋಧ್ಯೆ ರಾಮಮಂದಿರದ ಯಾಗ ಕಾರ್ಯಕ್ರಮದಲ್ಲಿ ಧಾರವಾಡದ ವಿದ್ವಾಂಸ ಭಾಗಿ

ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ.

ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು ಶುಕ್ಲ ಯಜುರ್ವೇದ ಶ್ಲೋಕ ಪಠಣ ಮಾಡಲಿದ್ದಾರೆ.

Share News

About BigTv News

Check Also

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, …

Leave a Reply

Your email address will not be published. Required fields are marked *

You cannot copy content of this page