Breaking News

ಮತ್ತೆ ಪೋಡಿ ಯೋಜನೆ ಆರಂಭಿಸಿದ ಸರ್ಕಾರಕ್ಕೆ ಅಭಿನಂದನೆ : ಎಮ್.ಆರ್.ಪಾಟೀಲ್

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು.

ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕನಾದ ನಾನು ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾವನೆ ಮಾಡಿ, ಸದನದ ಉಳಿದ ಸದಸ್ಯರು ಹಾಗೂ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಿದ್ದೆ. ಇದೀಗ ಯೋಜನೆಯ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರ ಮತ್ತೆ ಪೋಡಿ ಮುಕ್ತ ಗ್ರಾಮ ಯೋಜನೆಯನ್ನು ಆರಂಭಿಸಿದ್ದು, ಸರ್ಕಾರದ ನಡೆಯನ್ನು ಶಾಸಕನಾಗಿ ಸ್ವಾಗತಿಸುತ್ತೇನೆ.

ಇನ್ನು ಪೋಡಿ ಮುಕ್ತ ಗ್ರಾಮ ಯೋಜನೆಯ ಉದ್ದೇಶ ಆಯ್ದ ಗ್ರಾಮಗಳ ಬಹು ಮಾಲೀಕತ್ವದ ಖಾಸಗಿ/ಹಿಡುವಳಿ ಜಮೀನುಗಳನ್ನು ಅಳತೆಗೆ ಒಳಪಡಿಸಿ ಏಕಮಾಲೀಕತ್ವ ಪರಿವರ್ತಿಸುವುದು ಆಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂದಾಯ ಇಲಾಖೆ ಈ ಯೋಜನೆಯನ್ನು ಆರಂಭಿಸಿತ್ತು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *