Breaking News

ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ: ಸಿದ್ದರಾಮಯ್ಯ

ಬೆಂಗಳೂರು:ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿಧಾನ ಪರಿಷತ್​ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ರಾಜ್ಯದ ವಿರುದ್ಧ ಅನುಸರಿಸಿದ ತಾರತಮ್ಯದ ಕುರಿತು ಪ್ರಸ್ತಾಪಿಸಿ ತಮ್ಮ ಬಜೆಟ್ ವಿವರಣೆಗಿಂತಲೂ ಹೆಚ್ಚಾಗಿ ಬಿಜೆಪಿ ವಿರುದ್ಧ ಟೀಕಿಸಿಸಲು ಸಿಎಂ ಸಮಯ ಬಳಸಿಕೊಂಡರು.

ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲ ವಿಪಕ್ಷ ಇರಬೇಕು, ಸರ್ಕಾರದ ತಪ್ಪನ್ನು ಹೇಳುವ ಕೆಲಸ ಮಾಡಬೇಕು. ಆದರೆ ಬಿಜೆಪಿ- ಜೆಡಿಎಸ್ ಸದನ ಬಾಯ್ಕಾಟ್ ಮಾಡಿದ್ದಾರೆ. ರಾಜಕೀಯ ಜೀವನದಲ್ಲಿ ಇದೇ ಮೊದಲು, ವಿಪಕ್ಷ ಗೈರಾಗಿರುವ ಸದನಕ್ಕೆ ಉತ್ತರ ಕೊಡುತ್ತಿದ್ದೇನೆ. ವಿಧಾನಸಭೆಯಲ್ಲಿ ಅನಾಗರಿಕವಾಗಿ ನಡೆದುಕೊಂಡ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಪೇಪರ್ ಹರಿದು ಉಪಸಭಾಧ್ಯಕ್ಷರ ಮುಖಕ್ಕೆ ಎಸೆದರು. ಮಾರ್ಷಲ್ ಇಲ್ಲದಿದ್ದರೆ ಏನು ಮಾಡುತ್ತಿದ್ದರೋ ಗೊತ್ತಿಲ್ಲ. ಅದಕ್ಕಾಗಿ 10 ಸದಸ್ಯರ ಅಮಾನತು ಮಾಡಿದ್ದಾರೆ. ಉಳಿದವರು ಬಂದಿಲ್ಲ, ಪರಿಷತ್​ಗೂ ಬಂದಿಲ್ಲ. ಗಾಂಧಿ ಪ್ರತಿಮೆ ಎದುರು ಪ್ರತಿಭಟಿಸುವುದಲ್ಲ, ಗೋಡ್ಸೆ ಪ್ರತಿಮೆ ಎದುರು ಪ್ರತಿಭಟಿಸಬೇಕಿತ್ತು ಬಿಜೆಪಿಯವರು, ಗಾಂಧಿ ಕೊಂದವರು ಗಾಂಧಿ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *