Breaking News

ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

ಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್​ಸಿ)ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.

ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್​ಸಿ) ನಡೆಸುವ ನೇಮಕಾತಿಯು ಪಾರದರ್ಶಕವಾಗಿ ನಡೆಯುತ್ತದೆ.

ಆದರೆ, ಕೆಪಿಎಸ್
ನೇಮಕಾತಿಯು ಹಗರಣವಿಲ್ಲದೇ ನಡೆಯುವುದಿಲ್ಲ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಇಂದು ಎಲ್ಲ ಕ್ಷೇತ್ರಗಳು ಸಾಕಷ್ಟು ಸ್ಪರ್ಧಾತ್ಮಕವಾಗಿದ್ದು ತಾವು ಸಹ ಸತತವಾಗಿ ಪರಿಶ್ರಮದಿಂದ ಅಧ್ಯಯನ ಮಾಡಿ ಇನ್ನಷ್ಟು ಸಾಧನೆ ಮಾಡಬೇಕಾಗಿದೆ ಎಂದರು.

ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಸುಳ್ಳ ಪಂಚಗ್ರಹ ಹಿರೇಮಠ ಶ್ರೀ ಅಭಿನವ ಶಿವಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಯುಪಿಎಸ್​ಸಿ ಪರೀಕ್ಷೆಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ, ಮಾನವ ಕಂಪ್ಯೂಟರ್ ಖ್ಯಾತಿಯ ಅಂಧ ಪ್ರತಿಭೆ ಬಸವರಾಜ ಉಮಾರಾಣಿ, ಶೂಟಿಂಗ್ ಪ್ರತಿಭೆ ಐಶ್ವರ್ಯ ಬಾಲೇಹೊಸೂರು, ರೋಪ್ ಸ್ಕಿಪ್ಪಿಂಗ್ ಪ್ರತಿಭೆ ಐಶ್ವರ್ಯ ಹುಬ್ಬಳ್ಳಿಮಠ ಅವರನ್ನು ಸನ್ಮಾನಿಸಲಾಯಿತು. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಗಳಿಸಿದ ಆದಿತ್ಯ ಮಂಡ್ಯಾಳ ಸೇರಿದಂತೆ 64 ಪ್ರತಿಭಾವಂತರನ್ನು ಪುರಸ್ಕರಿಸಲಾಯಿತು.

ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ವೀರಣ್ಣ ಕಲ್ಲೂರ, ವಿಜಯಕುಮಾರ ಶೆಟ್ಟರ್, ವೀರಣ್ಣ ನೀರಲಗಿ ಇತರರು ಇದ್ದರು.
ಧಾರವಾಡ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನೆ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು. ಪ್ರತಿಭಾ ಪುರಸ್ಕಾರ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಸಾವಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು

Share News

About bigtvnews22

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *