ಮಂಡ್ಯ: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ ನೀಡಿದ್ದು, ಹೊಸ ತಂತ್ರಜ್ಞಾನ ಬಳಸಿ ಸ್ವೀಡ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ವಾಹನಗಳ ವೇಗ ಕ್ಯಾಪ್ಚರ್ ಮಾಡಲು ಎಐ ತಂತ್ರಜ್ಞಾನ ಬಳಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು,
ಮೊದಲ ಬಾರಿಗೆ ಮಂಡ್ಯಕ್ಕೆ ಬಂದ ಸಿದ್ದರಾಮಯ್ಯಗೆ ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಚ ನೀಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಸ್ವೀಡ್ ಡಿಟೆಕ್ಟರ್ ಗೆ ಚಾಲನೆ ನೀಡಿದ ಸಿಎಂಗೆ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ನಂತರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





