ಚಾಮರಾಜನಗರ:ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ ಮೃತಪಟ್ಟಿದ್ದು
ರಾಚಪ್ಪ, ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು, ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ.
ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





