ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ ಜೊತೆ ಈಗಾಗಲೇ ತನಿಖೆ ಮಾಡಿರುವ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಕಾಮಕುಮಾರ ನಂದಿ ಮಹಾರಾಜರ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





