ಮೈಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ, ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಮೂವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ (60) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಪತ್ನಿ, ಮಕ್ಕಳಿದ್ದಾರೆ. ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್ ಅವರ ಕಿರುಕುಳವೇ ಕಾರಣ ಎಂದು ಆರೋಪಿಸಿ ಗುರುರಾವ್ ಪತ್ನಿ ಮಂಜುಳಾ ಬಾಯಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





