ಮೈಸೂರು: ಕಾವೇರಿ ಭಾಗದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವ ಮುನ್ನ ನಾಲೆಗಳಿಗೆ ನೀರು ಹರಿಸಿ, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು
ಜಲದರ್ಶಿನಿ ಸರಕಾರಿ ಅತಿಥಿಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಕಾಲದಲ್ಲೂ ಸ್ಥಳೀಯ ರೈತರನ್ನು ನಿರ್ಲಕ್ಷಿಸಿ ಕಬಿನಿ, ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ, ಅಚ್ಚುಕಟ್ಟು ಭಾಗದ ರೈತರನ್ನು ಬಲಿ ಕೊಡುವುದು ಸರಿಯಲ್ಲ. ಜಲಾಶಯದ ಎಲ್ಲ ನಾಲೆಗಳಿಗೆ ನೀರು ಹರಿಸಿ ರೈತರು ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





