ಕುಂದಗೋಳ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ಗಬ್ಯೂರಮಠ (80) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಮೂರು- ನಾಲ್ಕು ವರ್ಷಗಳಿಂದ ಬೆಳೆ ಸರಿಯಾಗಿ ಬರದೆ ಇದ್ದರಿಂದ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





