Breaking News

ಎಮ್ಮಿಕೇರಿ ಸರ್ಕಾರಿ ಶಾಲೆಯ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಮತ್ತು ವನಮಹೋತ್ಸವ ಆಚರಣೆ….

ಧಾರವಾಡದ ಎಮ್ಮಿಕೇರಿ ಸರ್ಕಾರಿ ಶಾಲೆಯ ಆವರಣದಲ್ಲಿ ಮಾಳಮಡ್ಡಿಯ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಮತ್ತು ವನಮಹೋತ್ಸ ಕಾರ್ಯಕ್ರಮ ಆಚರಿಸಲಾಯಿತು. ವಾರ್ಡ್ನನ ಕಾರ್ಪೊರೇಟರ್ ಶ್ರೀ ವಿಷ್ಣುತೀರ್ಥ ಕೊರ್ಲಹಳ್ಳಿ ಅವರ ನೇತ್ರತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದ ಜೊತೆಗೆ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾಗರಿಕರು ಹಾಗೂ ಪೌರ ಕಾರ್ಮಿಕರ ಜೊತೆಗೂಡಿ ಸ್ವಚ್ಚತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಬಿ. ಇ. ಓ ಸಿಂದಗಿ, ಶಾಲೆಯ ಪ್ರಾಂಶುಪಾಲ ಶ್ರೀ ವಿ. ಎನ್. ಪಾಟೀಲ ವಾರ್ಡ್ ನ ಪ್ರಮುಖರಾದ ಗಿರೀಶ್ ಮುತ್ಸದ್ದಿ, ಸುರೇಶ್ ಪುರಾಣಿಕ, ಎಮ್. ಎನ್ ಪಾಟೀಲ, ರಾಘವೇಂದ್ರ ಗುತ್ತಲ, ಹಾಗೂ ಪೌರ ಕಾರ್ಮಿಕರು, ವಾರ್ಡಿನ ಎಲ್ಲ ನಾಗರಿಕರು ಮತ್ತು ಎಮ್ಮಿಕೇರಿ ಶಾಲೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *