ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಪ್ರತಿ ಭಾನುವಾರ, 2ನೇ ಮತ್ತು 4ನೇ ಶನಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಸೇವೆ ಲಭ್ಯವಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





