Breaking News

ತಾಳೆ ಬೆಳೆ ಪ್ರದೇಶ ವಿಸ್ತರಣೆ ಕಾರ್ಯಕ್ರಮ

ಧಾರವಾಡ: ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್. ಮರಿಗೌಡರ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಇಲಾಖೆ ಹಾಗೂ 3ಎಫ್ ಆಯಿಲ್ ಪಾಮ್ ಪ್ರೈವೆಟ್ ಲಿಮಿಟೆಡ್ ಕಂಪೆನಿರವರ ಸಹಯೋಗದಲ್ಲಿ ಧಾರವಾಡ ತಾಲ್ಲೂಕಿನ ತಿಮ್ಮಾಪೂರ ಗ್ರಾಮದ ಮಹಾಂತಯ್ಯ ಹಿರೇಮಠರವರ ಹೊಲದಲ್ಲಿ ತಾಳೆ ಸಸಿ ನಾಟಿ ಮಾಡುವ ಮೂಲಕ ತಾಳೆ-ಬೆಳೆ ಪ್ರದೇಶ ವಿಸ್ತರಣೆ ಕಾರ್ಯಕ್ರಮದ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಶಿವಲೀಲಾ ವಿನಯ ಕುಲಕರ್ಣಿ ರವರು ಆಗಮಿಸಿದ್ದರು. ಮರೇವಾಡ ಗ್ರಾಮ ಪಂಚಾಯತ್ ಅಧ್ಯಕ್ಷ ಈರಪ್ಪ ಪೂಜಾರ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಮರೇವಾಡ, ತಿಮ್ಮಾಪೂರ ಹಾಗೂ ಅಮ್ಮಿನಬಾವಿ ಗ್ರಾಮಗಳ ರೈತರು ಮತ್ತು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕ ಕಾಶೀನಾಥ ಭದ್ರಣ್ಣವರ, ಅಮ್ಮಿನಬಾವಿ ರೈ.ಸಂ.ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಮಹೇಶ ಪಟ್ಟಣಶೆಟ್ಟಿ ಹಾಗೂ 3ಎಫ್ ಆಯಿಲ್ ಪಾಮ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯ ಧಾರವಾಡ ಜಿಲ್ಲೆಯ ಏರಿಯಾ ಮ್ಯಾನೇಜರ್ ಮೃತ್ಯುಂಜಯ ಪಾಟೀಲ ಮತ್ತು ಕ್ಲಸ್ಟರ್ ಆಫೀಸರ್ ಸಿದ್ದಪ್ಪ ಕುಂದರಗಿ ಉಪಸ್ಥಿತರಿದ್ದರು.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *