ರಾಯಚೂರು:ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ರಾತ್ರಿ ಘಟನೆ ಜರುಗಿದೆ. ಬಸವನಗೌಡ ಆಗೋಲಿ (34) ಮೃತರು.
ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





