Breaking News

ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ…

ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಇಲ್ಲಿನ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶೀಘ್ರದಲ್ಲೇ, ಭದ್ರತಾ ಏಜೆನ್ಸಿಗಳ ಸರಿಯಾದ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಕಾಲ್ ಸೆಂಟರ್‌ಗೆ ಬಾಂಬ್ ಕರೆ ಬೆದರಿಕೆ ಬಂದ ನಂತರ ವಿಮಾನವನ್ನು ಖಾಲಿ ಮಾಡಲಾಗಿದೆ.

ಪ್ರಯಾಣಿಕರು ಬೆಳಗ್ಗೆ 8.30ಕ್ಕೆ ವಿಮಾನ ಹೊರಡಬೇಕಿತ್ತು. ಯುಕೆ-971 ವಿಮಾನವು ದೆಹಲಿಯಿಂದ ಪುಣೆಗೆ ಹೋಗ ಬೇಕಿತ್ತು. ಆದ್ರೆ ಗುರುಗ್ರಾಮ್‌ನಲ್ಲಿರುವ ಜಿಎಂಆರ್ ಕಾಲ್ ಸೆಂಟರ್​ಗೆ ಬಾಂಬ್ ಬೆದರಿಕೆ ಬಂದಿತ್ತು ಎಂದು ಭದ್ರತಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನದಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಎಲ್ಲ ಪ್ರಯಾಣಿಕರ ಲಗೇಜ್‌ಗಳನ್ನು ಡಿ-ಬೋರ್ಡಿಂಗ್ ಮಾಡಲಾಗಿದೆ. ಪ್ರಯಾಣಿಕರು ಪ್ರಸ್ತುತ ಟರ್ಮಿನಲ್ ಕಟ್ಟಡದಲ್ಲಿದ್ದಾರೆ. ಅವರಿಗೆ ಉಪಾಹಾರವನ್ನು ನೀಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *