ಮಂಗಳೂರು (ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬ ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಸಮೀಪ ಮಂಗಳವಾರ ನಡೆದಿದೆ. ಈ ಸಂಬಂಧ ಸುಳ್ಯದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಪ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆಗದ್ದೆ ಬಾಣಪದವಿನ ಶಿಕ್ಷಕ ದಿವಂಗತ ವಾಸು ನಾಯ್ಕ ಅವರ ಪತ್ನಿ ಸುರೇಖಾ (54) ಮತ್ತು ಗೋಳಿತ್ತೊಟ್ಟುವಿನ ಗಿರಿಜಾ (52) ಹಲ್ಲೆಗೊಳಗಾದ ಮಹಿಳೆಯರಾಗಿದ್ದಾರೆ. ಗೋಳಿತ್ತೊಟ್ಟುವಿನ ಗಿರಿಜಾ ಅವರು ಸುರೇಖಾ ಅವರ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಸುರೇಖಾ ಮನೆಗೆ ಆರೋಪಿ ಸುರೇಶ್ ಬಂದಿದ್ದ. ಬಳಿಕ ಸುರೇಶ್ ಸಮೀಪದ ಗುಡ್ಡದಲ್ಲಿ ಅಣಬೆಗಳು ಮೂಡಿವೆ ಎಂದು ನಂಬಿಸಿ, ಅಣಬೆಗಳನ್ನು ಕೀಳಲು ಗಿರಿಜಾ ಅವರನ್ನು ಕರೆದುಕೊಂಡು ಹೋಗಿದ್ದ.
bigtvnews | Hubli Dharwad News | Kannada News | Karnataka News Hubli News | News In Hubli | Local news





