ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್ ಮಾಡಿರುವುದಾಗಿ ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.

ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್ ಹಾಗೂ ಪವನ ಕುಲಕರ್ಣಿ ಮಧ್ಯೆ ಈ ಹಿಂದಿನಿಂದಲೂ ವಿವಾದ ನಡೆಯುತ್ತಿತ್ತು. ಇಬ್ಬರಿಗೆ ಸಂಬಂಧಿಸಿದ ಜಾಗವು ಅಕ್ಕಪಕ್ಕದಲ್ಲೇ ಇದ್ದು, ಇಂದು ಮತ್ತೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆಗ ಸುಶಾಂತ ಗುಂಡು ಹಾರಿಸಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಸುಶಾಂತನನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

