Breaking News

ಆಸ್ತಿ ವಿವಾದ ಸಂಬಂಧ ಗಲಾಟೆ ಗಾಳಿಯಲ್ಲಿ ಗುಂಡು….

ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್‌ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್​ ಮಾಡಿರುವುದಾಗಿ ಪೊಲೀಸ್​ ವಿಚಾರಣೆಯಿಂದ ತಿಳಿದುಬಂದಿದೆ.

ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್​ ಹಾಗೂ ಪವನ ಕುಲಕರ್ಣಿ ಮಧ್ಯೆ ಈ ಹಿಂದಿನಿಂದಲೂ ವಿವಾದ ನಡೆಯುತ್ತಿತ್ತು. ಇಬ್ಬರಿಗೆ ಸಂಬಂಧಿಸಿದ ಜಾಗವು ಅಕ್ಕಪಕ್ಕದಲ್ಲೇ ಇದ್ದು, ಇಂದು ಮತ್ತೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆಗ ಸುಶಾಂತ ಗುಂಡು ಹಾರಿಸಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ವಿದ್ಯಾಗಿರಿ ಠಾಣೆ ಪೊಲೀಸರು ಸುಶಾಂತನನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *