ಗಂಗಾವತಿ : ತಾಲೂಕಿನ ಮಲ್ಲಾಪುರ ಗ್ರಾಮದ ಸಮೀಪ ಇರುವ ಪುರಾತನ ಕಾಲದ ವಾಣಿ ವೀರಭದ್ರೇಶ್ವರ ದೇವಸ್ಥಾನದಲ್ಲಿದ್ದ ಶಿವಲಿಂಗವನ್ನು ಖದೀಮರು ಕದ್ದೊಯ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಿರ್ಜನ ಹಾಗೂ ಬೆಟ್ಟದ ಕಡಿದಾದ ಪ್ರದೇಶದಲ್ಲಿರುವ ಪೌರಾಣಿಕ ಹಿನ್ನೆಲೆಯ ದೇವಸ್ಥಾನದಲ್ಲಿ ಕಳೆದ ಹಲವು ದಶಕದಿಂದ ನಿತ್ಯಪೂಜೆ ಸಲ್ಲಿಸಲಾಗುತ್ತಿದೆ.
ಇದೇ ಸಮಯಕ್ಕಾಗಿ ಕಾದಿದ್ದ ಖದೀಮರು ದೇಗುಲದ ಗರ್ಭಗುಡಿಯಲ್ಲಿದ್ದ ಪಾಣಿ ಬಟ್ಟಲು ಮೇಲಿನ ಶಿವಲಿಂಗವನ್ನು ಕಿತ್ತೊಯ್ದು ವಿಕೃತಿ ಮೆರೆದಿದ್ದಾರೆ. ಬೆಳಗ್ಗೆ ಅರ್ಚಕರು ಪೂಜೆ ಸಲ್ಲಿಸಿ, ಮಧ್ಯಾಹ್ನದ ಹೊತ್ತಿಗೆ ಮರಳಿ ಗಂಗಾವತಿಗೆ ಬರುತ್ತಾರೆ. ಎಂದಿನಂತೆ ಬೆಳಗ್ಗೆ ಅರ್ಚಕ ಪೂಜೆಗೆ ತೆರಳಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅವರು ಗಂಗಾವತಿ ಗ್ರಾಮೀಣ ಠಾಣೆಗೆ ಆಗಮಿಸಿ ದೂರು ಸಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





