ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಇಂದು ಬೆಳಗಿನಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಪ್ರಕಟಣೆಯಲ್ಲಿ ಆಸ್ಪತ್ರೆ ತಿಳಿಸಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದು ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





