ಬೆಂಗಳೂರು: ಬಿಜೆಪಿ ಸರ್ಕಾರವೂ ನೀರು ಬಿಟ್ಟಿತ್ತು ಎಂದು ಆರೋಪ ಮಾಡುವ ಮುನ್ನ ನಮ್ಮ ಕಾಲದಲ್ಲಿ ತಮಿಳುನಾಡಿಗೆ ಬಿಟ್ಟ ನೀರಿನ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇನ್ನು ಮಾಜಿ ಸಿಎಂ ಬೊಮ್ಮಾಯಿ ಅವರೂ ಕಾಂಗ್ರೆಸ್ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು, ನಮ್ಮ ಕಾಲದಲ್ಲಿ ರೈತರಿಗೆ ನೀರು ಇಟ್ಟುಕೊಂಡೇ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ನಾವು ಅಧಿಕಾರದಲ್ಲಿದ್ದಾಗ ರೈತರು ಏನು ಪ್ರತಿಭಟನೆ ಮಾಡಿದ್ದರಾ..?. ಸುಮ್ಮನೆ ರಾಜಕೀಯಕ್ಕಾಗಿ ಏನೋ ಮಾತನಾಡುವುದು ಸರಿಯಲ್ಲ. ಡಿಕೆ ಶಿವಕುಮಾರ್ ಅದೇನೋ ಬಿಚ್ಚಿಡ್ತಾರೋ ಬಿಚ್ಚಿಡಲಿ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಬಗ್ಗೆ, ಅಭಿವೃದ್ದಿ ಬಗ್ಗೆ ಗಮನ ಕೊಡುತ್ತಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಎಂದು ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





