ಬೆಳಗಾವಿ: ಜಿಲ್ಲೆಯ ಶಿವಬಸವ ನಗರದಲ್ಲಿ ನಿನ್ನೆ(ಬುಧವಾರ) ರಾತ್ರಿ 9 ಗಂಟೆ ಸುಮಾರಿಗೆ ಹಂತಕರು ಬೈಕ್ ಮೇಲೆ ಹಿಂದಿನಿಂದ ಬಂದು ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯ ಲಭ್ಯವಾಗಿದೆ. ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ.
ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು ಹೊಂಚು ಹಾಕಿ ಕಾಯುತ್ತಿದ್ದರು. ಬೈಕ್ನ್ನು ದಾಟಿ ಮುಂದೆ ನಾಗರಾಜ ಹೋಗುತ್ತಿದ್ದಂತೆ ಹಿಂದಿನಿಂದ ಓರ್ವ ಆರೋಪಿ ಕಲ್ಲಿನಿಂದ ಜೋರಾಗಿ ತಲೆಗೆ ಹೊಡೆದಿದ್ದಾನೆ. ಹೊಡೆತದ ರಭಸಕ್ಕೆ ನಾಗರಾಜ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





