Breaking News

ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ಮಳೆ…

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.

6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚುಸಹಿತ ಗುಡುಗು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *