ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು.
ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ ಸೇರಿದ ಒಂದು ಬೊಲೆರೋ ವಾಹನ ಹಾಗೂ ಕಚೇರಿಯ ಉಪಕರಣಗಳನ್ನು ಶುಕ್ರವಾರ ಬೆಳಗ್ಗೆ ವಶಪಡಿಸಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





