Breaking News

ವೆಂಕಟೇಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ…

ಹಾಸನ: ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಭೀಮ ಎಂಬ ಕಾಡಾನೆ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಶಾರ್ಪ್ ಶೂಟರ್ ಹೆಚ್​. ವೆಂಕಟೇಶ್ ಅವರ ಕುಟುಂಬಕ್ಕೆ ಪ್ರತಿಷ್ಠಾನದಿಂದ 10 ಲಕ್ಷ ರೂ. ವಿಶೇಷ ಪರಿಹಾರ ಸೇರಿ ಒಟ್ಟು 25 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಹೊನ್ನವಳ್ಳಿಯಲ್ಲಿರುವ ವೆಂಕಟೇಶ್ ಅವರ ಮನೆಗೆ ಗುರುವಾರ ಭೇಟಿ ನೀಡಿದ ಸಚಿವರು, ಮೃತ ವೆಂಕಟೇಶ್ ಅವರ ಪತ್ನಿ ಜಿ.ಎಸ್. ಮಂಜುಳಾ ಮತ್ತು ಪುತ್ರರಾದ ಮೋಹಿತ್ ಮತ್ತು ಮಿಥುನ್ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ವೆಂಕಟೇಶ್ ಅವರು ತಮ್ಮ ಅದ್ಭುತ ಕಾರ್ಯದಿಂದ ಆನೆ ವೆಂಕಟೇಶ್ ಎಂದೇ ಖ್ಯಾತರಾಗಿದ್ದರು. ಶಾರ್ಪ್ ಶೂಟರ್ ವೆಂಕಟೇಶ್ ಅವರ ನಿಧನದಿಂದ ಅರಣ್ಯ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ನಿಮ್ಮ ಈ ನೋವಿನಲ್ಲಿ ನಾವೂ ಭಾಗಿಯಾಗುತ್ತೇವೆ ಎಂದು ಸಾಂತ್ವನ ಹೇಳಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *