Breaking News

ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಬಂದ್‌…..

ರಾಮನಗರ: ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಇಂದು ಕರೆ ನೀಡಿದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್​ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ.

ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂದ್​ಗೆ ಕರೆ ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಮನಗರ ಜನತೆ ಸ್ವಯಂಪ್ರೇರಣೆಯಿಂದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ನಮಗೆ ಬೇಕು ಎನ್ನುವ ಸಂದೇಶ ರವಾನೆ ಮಾಡಿದ್ದಾರೆ.

ಇಂದು ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ವರ್ತಕರು ಬಂದ್​ ಮಾಡಿದ್ದಾರೆ. ಟೀ ಅಂಗಡಿಗಳು, ಸಣ್ಣ ಪುಟ್ಟ ಹೋಟೆಲ್​ಗಳಿಗೆ ಸಹ ಬೀಗ ಹಾಕಿ ಬಂದ್​ಗೆ ಸಹಕಾರ ನೀಡಿದ್ದಾರೆ. ಇದರ‌ ಜತೆಗೆ ರಾಮನಗರ ಎಪಿಎಂಸಿ ಮಾರುಕಟ್ಟೆ, ರೇಷ್ಮೆ ಗೂಡಿನ ಮಾರುಕಟ್ಟೆಗಳು ಸಹ ತಮ್ಮ ವಹಿವಾಟು‌ ಸ್ಥಗಿತಗೊಳಿಸಿ ಬಂದ್​ಗೆ ಬೆಂಬಲ ಸೂಚಿಸಿವೆ. ಸ್ವಯಂಪ್ರೇರಿತರಾಗಿ ವರ್ತಕರು, ವ್ಯಾಪಾರಿಗಳು, ದಲ್ಲಾಳಿಗಳು ಹಾಗೂ ರೈತರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳು ಸಹ ಬಂದ್​ ಬಂಬಲಿಸಿ ರಜೆ ಘೋಷಣೆ ಮಾಡಿದ್ದರೆ, ಸಾರಿಗೆ ಸಂಚಾರ ಸಹ ಸಂಪೂರ್ಣವಾಗಿ ನಿಂತು ನಗರದ ರಸ್ತೆಗಳು ಬಿಕೋ ಎನ್ನುತ್ತಿವೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *