Breaking News

ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿ…

ಮೈಸೂರು: ಬರಡು ಭೂಮಿಯಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಸಿದ ಕನ್ನಡ ಉಪನ್ಯಾಸಕರೊಬ್ಬರ ಕಾರ್ಯವೈಖರಿಗೆ ಇಲ್ಲಿನ ದೊಡ್ಡ ಕವಲಂದೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣವೂ ಪೂರಕ ಎಂಬ ಮಾತಿಗೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ.

ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿಯಾಗಿ ರೂಪುಗೊಂಡಿದೆ. ಕನ್ನಡ ಉಪನ್ಯಾಸಕ ಹಾಗೂ ಎನ್.ಎಸ್.ಎಸ್ ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿದ್ಯಾರ್ಥಿಗಳು, ಪ್ರಾಂಶುಪಾಲ ಡಾ.ಟಿ.ಆರ್ ಸಿದ್ದರಾಜು ಹಾಗು ಸಹೋದ್ಯೋಗಿಗಳ ಸಹಕಾರದಿಂದ ಕಾಲೇಜು ಕ್ಯಾಂಪಸ್‌ ಹಸಿರಾಗಿದೆ

ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳ ಬೆಳವಣಿಗೆಗಾಗಿ ಮೀಸಲಾಗಿದ್ದ ಜಾಗ ಯಾವುದಕ್ಕೂ ಪ್ರಯೋಜನವಿಲ್ಲದಂತಾಗಿತ್ತು. ಆಟದ ಮೈದಾನ ಹೊರತುಪಡಿಸಿ ಉಳಿದ ಜಾಗವನ್ನು ಹಸಿರೀಕರಣ ಮಾಡಲು ವೆಂಕಟರಮಣ ನಿರ್ಧರಿಸಿ ಕಾರ್ಯೋನ್ಮುಖರಾಗಿದ್ದರು. ಇದಕ್ಕಾಗಿ ಸಹೋದ್ಯೋಗಿಗಳ ಅಪಹಾಸ್ಯವನ್ನೂ ಅವರು ಎದುರಿಸಿದ್ದರಂತೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *