Breaking News

ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು ಕೊನೆ ದಿನ…

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ.

ಸವಾರರು ಸದ್ಬಳಕೆ‌‌ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ ಎರಡು ಬಾರಿ ಅವಕಾಶ ನೀಡಿದಾಗ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಅನಂತರ ಜುಲೈ 11ರಿಂದ ಸೆ.9 ರವರೆಗೆ ಮೂರನೇ ಬಾರಿ ಅವಕಾಶ ನೀಡಿತ್ತು.‌ ಇಂದು ಕೊನೆಯ ದಿನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ …

Leave a Reply

Your email address will not be published. Required fields are marked *