ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ.
ಸವಾರರು ಸದ್ಬಳಕೆ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ ಎರಡು ಬಾರಿ ಅವಕಾಶ ನೀಡಿದಾಗ ಸವಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಅನಂತರ ಜುಲೈ 11ರಿಂದ ಸೆ.9 ರವರೆಗೆ ಮೂರನೇ ಬಾರಿ ಅವಕಾಶ ನೀಡಿತ್ತು. ಇಂದು ಕೊನೆಯ ದಿನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





