Breaking News

ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆ…..

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.

ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಾಗನೂರು ರುದ್ರಾಕ್ಷಿ ಮಠವು ಗಡಿಯಲ್ಲಿ ನೂರಾರು ವರ್ಷಗಳಿಂದ ಅನ್ನ, ಅಕ್ಷರ, ಆಶ್ರಯ ನೀಡುತ್ತಾ ಜನಸಾಮಾನ್ಯರ ಮಠವಾಗಿ ಜನಪ್ರಿಯವಾಗಿದೆ. ಅಲ್ಲದೇ ಗಡಿಯಲ್ಲಿ ಕನ್ನಡವನ್ನೂ ಗಟ್ಟಿಗೊಳಿಸುವ ಕೈಂಕರ್ಯಯವನ್ನು ಮಾಡುತ್ತಿದೆ. ಇನ್ನು ಬಸವತತ್ವವನ್ನೇ ಉಸಿರಾಗಿಸಿಕೊಂಡಿರುವ ಶ್ರೀ ಮಠವು ವಿವಿಧ ಕಾರ್ಯಕ್ರಮಗಳ ಮೂಲಕ ಧರ್ಮಜಾಗೃತಿ ಮಾಡುತ್ತಾ ಬಂದಿದೆ. ಈಗಿನ ಪೀಠಾಧಿಪತಿ ಡಾ‌. ಅಲ್ಲಮಪ್ರಭು ಸ್ವಾಮೀಜಿ ಕೂಡ ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ …

Leave a Reply

Your email address will not be published. Required fields are marked *