Breaking News

ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು…

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು, ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂಡು ಹೋದರೂ ವಾಹನ ಸಂಚಾರ ದುಸ್ತರವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು ಕವಿದಿದ್ದು, ಆ ಮಂಜಿನಲ್ಲಿ ವಾಹನ ಸಂಚರಿಸಲಾಗದೆ ಎರಡು ಅಪಘಾತಗಳು ಕೂಡ ಸಂಭವಿಸಿವೆ.

ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ, ಬೊಲೆರೋ ವಾಹನವೊಂದು ದಟ್ಟ ಮಂಜಿನಲ್ಲಿ ಸರಿಯಾಗಿ ದಾರಿ ಕಾಣದೇ ರಸ್ತೆಯ ಒಂದು ಬದಿಯ ಪ್ರಪಾತಕ್ಕೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಗೆ ಡಿಕ್ಕಿಯೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *