Breaking News

ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ..

ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ‌ 206ರಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳು ಭದ್ರಾವತಿ ನಿವಾಸಿಗಳಾಗಿದ್ದು, ತರಿಕೆರೆಯಿಂದ ಭದ್ರಾವತಿಗೆ ವಾಪಸ್ ಆಗುವಾಗ ದುರ್ಘಟನೆ ನಡೆದಿದೆ. ಈ ಕುರಿತು ತರಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Share News

About BigTv News

Check Also

ಸ್ಥಗಿತಗೊಂಡ ಗರಡಿಮನೆ ತಾಲೀಮು: ನಿರ್ವಹಣೆಯಿಲ್ಲದೇ ಕಣ್ಮರೆಯಾದ 150 ಗರಡಿಮನೆ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಗರಡಿಮನೆ ತಾಲೀಮು ಅಂದರೇ ಅದೊಂದು ಗತ್ತು ಗಾಂಭಿರ್ಯ ಇರುತ್ತಿತ್ತು. ಧಾರವಾಡದ ಪೈಲ್ವಾನರು ಅಂದರೆ ಕೊಲ್ಹಾಪುರ, ಪುಣೆ, …

Leave a Reply

Your email address will not be published. Required fields are marked *

You cannot copy content of this page