ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ನೂರಕ್ಕೆ ನೂರರಷ್ಟು ಸೋಲುತ್ತಾರೆ. ಏನಾದರೂ ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರಿಗೆ ನೇರ ಹಾಕಿದ್ದಾರೆ.
ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ ಕಂಡವರ ಕಾಲನ್ನು ಹಿಡಿಯುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ. ಈ ಬಗ್ಗೆ ಸಮೀಕ್ಷೆಯ ವರದಿಗಳು ಸಹ ಹೇಳಿವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ನೂರಕ್ಕೆ ನೂರರಷ್ಟು ಸೋಲುತ್ತಾರೆ. ಪ್ರತಾಪ್ ಸಿಂಹ ಏನಾದರೂ ಗೆದ್ದರೆ ನಾನು ಊರನ್ನು ಬಿಟ್ಟು ಬಿಡುತ್ತೇನೆ ಎಂದು ಅವರಿಗೆ ನೇರ ಸವಾಲು ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





